ರಾಗ: ಕಾಂಬೋಧಿ ತಾಳ: ಝಂಪಾ
ಕೈಲಾಸವಾಸ ಗೌರೀಶ ಈಶಾ || ಪ ||
ತೈಲಧಾರೆಯಂತೆ ಮನಸು ಕೊಡು ಹರಿಯಲಿ || ಅ.ಪ ||
ಅಹೋರಾತ್ರಿಯಲಿ ನಾನು ಅನುಚರಾಗ್ರಣಿಯಾಗಿ
ಮಹಿಯೊಳಗೆ ಚರಿಸಿದೆನೊ ಮಹದೇವನೇ
ಅಹಿ ಭೂಷಣನೆಯೆನ್ನ ಅವಗುಣಗಳೆಣಿಸದಲೆ
ವಿಹಿತ ಧರ್ಮದಲಿ ವಿಷ್ಣು ಭಕುತಿಯ ಕೊಡು ಶಂಭೋ || ೧ ||
ಮನಸು ಕಾರಣವಲ್ಲ ಪಾಪ ಪುಣ್ಯಕ್ಕೆಲ್ಲ
ಅನಲಾಕ್ಷ ನಿನ್ನ ಪ್ರೇರಣೆಯಿಲ್ಲದೇ
ದನುಜಗಜ ಮದಹಾರಿ ದಂಡಪ್ರಣಾಮವಮಾಳ್ಪೆ
ಮನಸೋ ಈ ಶಿರವ ಸಜ್ಜನರ ಸಿರಿ ಚರಣದಲಿ || ೨ ||
ಭಾಗೀರಥೀಧರನೇ ಭಯವ ಪರಿಹರಿಸಯ್ಯ ಲೇ
ಸಾಗಿ ಒಲಿದು ಸಂತತ ಶರ್ವ ದೇವಾ
ಭಾಗವತ ಜನಪ್ರೀಯ ವಿಜಯ ವಿಟ್ಠಲನಂಘ್ರಿ
ಜಾಗುಮಾಡದೆ ಭಜಿಪ ಭಾಗ್ಯವನೆ ಕೊಡು ಶಂಭೋ || ೩ ||



ಎಲ್ಲ ಸ್ತೋತ್ರಗಳ PDF ಆವೃತ್ತಿಯನ್ನು ಸ್ತೋತ್ರಗಳ ಕೊನೆಯಲ್ಲಿ ಸೇರಿಸಲಾಗಿದೆ.
