ಕೈಲಾಸವಾಸ ಗೌರೀಶ ಈಶಾ (ಶ್ರೀವಿಜಯದಾಸರು)

ರಾಗ: ಕಾಂಬೋಧಿ     ತಾಳ: ಝಂಪಾ

ಕೈಲಾಸವಾಸ ಗೌರೀಶ ಈಶಾ || ಪ ||
ತೈಲಧಾರೆಯಂತೆ ಮನಸು ಕೊಡು ಹರಿಯಲಿ || ಅ.ಪ ||

ಅಹೋರಾತ್ರಿಯಲಿ ನಾನು ಅನುಚರಾಗ್ರಣಿಯಾಗಿ
ಮಹಿಯೊಳಗೆ ಚರಿಸಿದೆನೊ ಮಹದೇವನೇ
ಅಹಿ ಭೂಷಣನೆಯೆನ್ನ ಅವಗುಣಗಳೆಣಿಸದಲೆ
ವಿಹಿತ ಧರ್ಮದಲಿ ವಿಷ್ಣು ಭಕುತಿಯ ಕೊಡು ಶಂಭೋ || ೧ ||

ಮನಸು ಕಾರಣವಲ್ಲ ಪಾಪ ಪುಣ್ಯಕ್ಕೆಲ್ಲ
ಅನಲಾಕ್ಷ ನಿನ್ನ ಪ್ರೇರಣೆಯಿಲ್ಲದೇ
ದನುಜಗಜ ಮದಹಾರಿ ದಂಡಪ್ರಣಾಮವಮಾಳ್ಪೆ
ಮನಸೋ ಈ ಶಿರವ ಸಜ್ಜನರ ಸಿರಿ ಚರಣದಲಿ || ೨ ||

ಭಾಗೀರಥೀಧರನೇ ಭಯವ ಪರಿಹರಿಸಯ್ಯ ಲೇ
ಸಾಗಿ ಒಲಿದು ಸಂತತ ಶರ್ವ ದೇವಾ
ಭಾಗವತ ಜನಪ್ರೀಯ ವಿಜಯ ವಿಟ್ಠಲನಂಘ್ರಿ
ಜಾಗುಮಾಡದೆ ಭಜಿಪ ಭಾಗ್ಯವನೆ ಕೊಡು ಶಂಭೋ || ೩ ||

This entry was posted in ಕೀರ್ತನೆ-ದೇವರ ನಾಮ, ದೇವತಾ ಸ್ತೋತ್ರಗಳು, ಶಿವಸ್ತೋತ್ರಗಳು, ಹರಿದಾಸ ವಾಙ್ಮಯ and tagged , , , , , , . Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Connecting to %s