About Guru

Studying and consulting Vedic Astrology from fifteen years. To discover greater meanings and offer my clients positive direction and guidance.

ಮನವ ಶೋಧಿಸಬೇಕೋ (ಶ್ರೀ ಪುರಂದರದಾಸರು)

ಮನವ ಶೋಧಿಸಬೇಕೋ ನಿಚ್ಚ
ದಿನದಿನವು ಮಾಡುವ ಪಾಪಪುಣ್ಯದ ವೆಚ್ಚ || ಪ ||

ಧರ್ಮ-ಅಧರ್ಮ ವಿಂಗಡಿಸಿ ನೀ
ಅಧರ್ಮದ ನರಗಳ ಬೇರೆ ಕತ್ತರಿಸಿ
ನಿರ್ಮಲಾಚಾರವ ಚರಿಸಿ ಪರ
ಬ್ರಹ್ಮ ಮೂರುತಿ ಪಾದಕಮಲವ ಭಜಿಸಿ || ೧ ||

ತನುವ ಖಂಡಿಸಿ ಒಮ್ಮೆ ಮಾಣೋ ನಿನ್ನ
ಮನವ ದಂಡಿಸಿ ಪರಮಾತ್ಮನ್ನ ಕಾಣೋ
ಕೊನೆಗೆ ನಿನ್ನೊಳು ನೀನೇ ಜಾಣೋ ಮುಕ್ತಿ
ನಿನಗೆ ದೂರಿಲ್ಲವೋ ಅದೇ ಒಂದು ಗೇಣೋ || ೨ ||

ಆತನ್ನ ನಂಬಿ ಕೇಡಿಲ್ಲ ಅವ
ಪಾತಕ ಪತಿತ ಸಂಗವ ಮಾಳ್ವನಲ್ಲ
ನೀತಿವಂತರೆ ಕೇಳಿರೆಲ್ಲ ನಮ-
ಗಾತನೆ ಗತಿಯೀವ ಪುರಂದರ ವಿಠಲ || ೩ ||

ತೊರೆದು ಜೀವಿಸಬಹುದೆ (ಶ್ರೀ ಕನಕದಾಸರು)

ತೊರೆದು ಜೀವಿಸಬಹುದೆ (ಶ್ರೀಕನಕದಾಸರು)ರಾಗ – ಮುಖಾರಿ                   ತಾಳ – ಏಕ

ತೊರೆದು ಜೀವಿಸಬಹುದೆ ಹರಿ ನಿನ್ನ ಚರಣವ
ತೊರೆದು ಜೀವಿಸಬಹುದೆ || ಪ ||

ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ
ಕರಪಿಡಿದೆನ್ನನು ಕಾಯೊ ಕರುಣಾನಿಧಿ || ಅ.ಪ ||

ತಾಯಿ ತಂದೆಯ ಬಿಟ್ಟು ತಪವ ಮಾಡಲು ಬಹುದು
ದಾಯಾದಿ ಬಂಧುಗಳ ಬಿಡಲು ಬಹುದು
ರಾಯ ಮುನಿದರೆ ರಾಜ್ಯವ ಬಿಡಬಹುದು
ಕಾಯಜಪಿತ ನಿನ್ನಡಿಯ ಬಿಡಲಾಗದು || ೧ ||

ಒಡಲು ಹಸಿದರೆ ಅನ್ನವ ಬಿಡಬಹುದು
ಪಡೆದ ಕ್ಷೇತ್ರವ ಬಿಟ್ಟು ಹೊರಡಲು ಬಹುದು
ಮಡದಿ ಮಕ್ಕಳ ಕಡೆಗೆ ತೊಲಗಿಸಿಬಿಡಬಹುದು
ಕಡಲೊಡೆಯ ನಿಮ್ಮಡಿಯ ಘಳಿಗೆ ಬಿಡಲಾಗದು || ೨ ||

ಪ್ರಾಣವ ಪರರಿಗೆ ಬೇಡಿದರೆ ಕೊಡಬಹುದು
ಮಾನಾಭಿಮಾನವ ತಗ್ಗಿಸಬಹುದು
ಪ್ರಾಣದಾಯಕನಾದ ಆದಿಕೇಶವರಾಯ
ಜಾಣ ಶ್ರೀಕೃಷ್ಣ ನಿನ್ನಡಿಯ ಬಿಡಲಾಗದು || ೩ ||

ಶ್ರೀ ತುಲಸೀಮಾಹಾತ್ಮ್ಯಮ್

 

shri-krishna-foot-tulsi-small

ಶ್ರೀತುಲಸೀಮಾಹಾತ್ಮ್ಯಮ್

ಶ್ರೀತುಲಸೀಮಾಹಾತ್ಮ್ಯಮ್  

ಪಾಪಾನಿ ಯಾನಿ ರವಿಸೂನುಪಟಸ್ಥಿತಾನಿ
ಗೋಬ್ರಹ್ಮಬಾಲಪಿತೃಮಾತೃವಧಾದಿಕಾನಿ |
ನಶ್ಯಂತಿ ತಾನಿ ತುಲಸೀವನದರ್ಶನೇನ
ಗೋಕೋಟಿದಾನಸದೃಶಂ ಫಲಮಾಪ್ನುವಂತಿ || ೧ ||

ಪುಷ್ಕರಾದ್ಯಾನಿ ತೀರ್ಥಾನಿ ಗಂಗಾದ್ಯಾಃ ಸರಿತಸ್ಥತಾ |
ವಾಸುದೇವಾದಯೋ ದೇವಾ ವಸಂತಿ ತುಲಸೀವನೇ || ೨ ||

ತುಲಸೀಕಾನನಂ ಯತ್ರ ಯತ್ರ ಪದ್ಮವನಾನಿ ಚ |
ವಸಂತಿ ವೈಷ್ಣವಾ ಯತ್ರ ತತ್ರ ಸನ್ನಿಹಿತೋ ಹರಿಃ || ೩ ||

ಯನ್ಮೂಲೇ ಸರ್ವತೀರ್ಥಾನಿ ಯನ್ಮಧ್ಯೇ ಸರ್ವದೇವತಾಃ |
ಯದಗ್ರೇ ಸರ್ವವೇದಾಶ್ಚ ತುಲಸಿ ತ್ವಾಂ ನಮಾಮ್ಯಹಮ್ || ೪ ||
ತುಲಸಿ ಶ್ರೀಸಖಿ ಶುಭೇ ಪಾಪಹಾರಿಣಿ ಪುಣ್ಯದೇ |
ನಮಸ್ತೇ ನಾರದನುತೇ ನಾರಾಯಣಮನಃಪ್ರಿಯೇ || ೫ ||

ರಾಜದ್ವಾರೇ ಸಭಾಮಧ್ಯೇ ಸಂಗ್ರಾಮೇ ಶತ್ರುಪೀಡನೇ |
ತುಲಸೀಸ್ಮರಣಂ ಕುರ್ಯಾತ್ ಸರ್ವತ್ರ ವಿಜಯೀ ಭವೇತ್ || ೬ ||

ತುಲಸ್ಯಮೃತಜನ್ಮಾಽಸಿ ಸದಾ ತ್ವಂ ಕೇಶವಪ್ರಿಯೇ |
ಕೇಶವಾರ್ಥೇ ಚಿನೋಮಿ ತ್ವಾಂ ವರದಾ ಭವ ಶೋಭನೇ || ೭ ||

ಮೋಕ್ಷೈಕಹೇತೋರ್-ಧರಣೀ-ಧರಸ್ಯ ವಿಷ್ಣೋಃ  
ಸಮಸ್ತಸ್ಯ ಗುರೋಃ ಪ್ರಿಯಸ್ಯ |  
ಆರಾಧನಾರ್ಥಂ ಪುರುಷೋತ್ತಮಸ್ಯ  
ಛಿಂದೇ ದಲಂ ತೇ ತುಲಸಿ ಕ್ಷಮಸ್ವ || ೮ ||

ಕೃಷ್ಯಾರಂಭೇ ತಥಾ ಪುಣ್ಯೇ ವಿವಾಹೇ ಚಾರ್ಥಸಂಗ್ರಹೇ |
ಸರ್ವಕಾರ್ಯೇಷು ಸಿದ್ದ್ಯರ್ಥಂ ಪ್ರಸ್ಥಾನೇ ತುಲಸೀಂ ಸ್ಮರೇತ್ || ೯ ||

ಯಃ ಸ್ಮರೇತ್ ತುಲಸೀಂ ಸೀತಾಂ ರಾಮಂ ಸೌಮಿತ್ರಿಣಾ ಸಹ |
ವಿನಿರ್ಜಿತ್ಯ ರಿಪೂನ್ ಸರ್ವಾನ್ ಪುನರಾಯಾತಿ ಕಾರ್ಯಕೃತ್ || ೧೦ ||

ಯಾ ದೃಷ್ಟಾ ನಿಖಿಲಾಘಸಂಘಶಮನೀ ಸ್ಪೃಷ್ಟಾ ವಪುಃಪಾವನೀ  
ರೋಗಾಣಾಮಭಿವಂದಿತಾ ನಿರಸನೀ ಸಿಕ್ತಾಽಂತಕತ್ರಾಸಿನೀ |  
ಪ್ರತ್ಯಾಸತ್ತಿವಿಧಾಯಿನೀ ಭಗವತಃ ಕೃಷ್ಣಸ್ಯ ಸಂರೋಪಿತಾ  
ನ್ಯಸ್ತಾ ತಚ್ಚರಣೇ ವಿಮುಕ್ತಿಫಲದಾ ತಸ್ಯೈ ತುಲಸ್ಯೈ ನಮಃ || ೧೧ ||  

ಖಾದನ್ ಮಾಂಸಂ ಪಿಬನ್ ಮದ್ಯಂ ಸಂಗಚ್ಛನ್ನಂತ್ಯಜಾದಿಭಿಃ |
ಸದ್ಯೋ ಭವತಿ ಪೂತಾತ್ಮಾ ಕರ್ಣಯೋಸ್ತುಲಸೀಂ ಧರನ್ || ೧೨ ||

ಚತುಃ ಕರ್ಣೇ ಮುಖೇ ಚೈಕಂ ನಾಭಾವೇಕಂ ತಥೈವ ಚ |  
ಶಿರಸ್ಯೇಕಂ ತಥಾ ಪ್ರೋಕ್ತ ತೀರ್ಥೇ ತ್ರಯಮುದಾಹೃತಮ್ || ೧೩ ||  
 
ಅನ್ನೋಪರಿ ತಥಾ ಪಂಚ ಭೋಜನಾಂತೇ ದಲತ್ರಯಮ್ |  
ಏವಂ ಶ್ರೀತುಲಸೀಂ ಗ್ರಾಹ್ಯಾ ಅಷ್ಟಾದಶದಲಾ ಸದಾ || ೧೪ ||  

|| ಇತಿ ಶ್ರೀತುಲಸೀಮಾಹಾತ್ಮ್ಯಮ್ ||

ರಾಯಬಾರೊ ತಂದೆತಾಯಿ ಬಾರೊ (ಶ್ರೀ ಜಗನ್ನಾಥ ದಾಸರು)

ರಾಯಬಾರೊ ತಂದೆತಾಯಿ ಬಾರೊರಾಗ – ಆನಂದಭೈರವಿ        ತಾಳ – ಏಕತಾಳ

ರಾಯಬಾರೊ ತಂದೆತಾಯಿ ಬಾರೊ
ನಮ್ಮ ಕಾಯಿ ಬಾರೊ
ಮಾಯಿಗಳ ಮರ್ದಿಸಿದ ರಾಘವೇಂದ್ರ || ಪ ||

ವಂದಿಪ ಜನರಿಗೆ ಮಂದಾರ ತರುವಂತೆ
ಕುಂದದಭೀಷ್ಟೆಯ ಸಲಿಸುತಿಪ್ಪ ಸುರಮುನಿ
ಮಂದನ ಮತಿಗೆ ರಾಘವೇಂದ್ರ || ೧ ||

ಭಾಸುರಚರಿತನೆ ಭೂಸುರವಂದ್ಯನೆ
ಶ್ರೀಸುಧೀಂದ್ರಾರ್ಯರ ವರಪುತ್ರನೆನಿಸಿದ
ದೇಶಿಕರೊಡೆಯ ರಾಘವೇಂದ್ರ || ೨ ||

ರಾಮಪದಸರಸೀರುಹಭೃಂಗ ಕೃಪಾಂಗ
ಭ್ರಾಮಕಜನರ ಮತಭಂಗ ಮಾಡಿದ
ಧೀಮಂತರೊಡೆಯನೆ ರಾಘವೇಂದ್ರ || ೩ ||

ಆರು ಮೂರೇಳು ನಾಲ್ಕೆಂಟು ಗ್ರಂಥಸಾರಾರ್ಥ
ತೋರಿಸಿದೆ ಸರ್ವರಿಗೆ ಸರ್ವಜ್ಞ
ಸೂರಿಗಳರಸನೆ ರಾಘವೇಂದ್ರ || ೪ ||

ಭೂತಳನಾಥನ ಭೀತಿಯ ಬಿಡಿಸಿದೆ
ಪ್ರೇತತ್ವ ಕಳೆದೆ ಮಹಿಷಿಯ ಶ್ರೀಜಗ-
ನ್ನಾಥವಿಠಲನ ಪ್ರೀತಿಪಾತ್ರ ರಾಘವೇಂದ್ರ || ೫ ||

ಅಪಮೃತ್ಯು ಪರಿಹರಿಸೋ ಅನಿಲದೇವ (ಶ್ರೀ ಜಗನ್ನಾಥ ದಾಸರು)

ರಾಗ – ಕಾಂಬೋದಿ              ತಾಳ – ಝಂಪೆ

ಮುಖ್ಯಪ್ರಾಣ ದೇವರು ಉಡುಪಿಅಪಮೃತ್ಯು ಪರಿಹರಿಸೋ ಅನಿಲದೇವ
ಕೃಪಣವತ್ಸಲನೆ ಕಾವರ ಕಾಣೆ ನಿನ್ನುಳಿದು || ಪ ||

ನಿನಗಿನ್ನು ಸಮರಾದ ಅನಿಮಿತ್ತ ಬಂಧುಗಳು
ಎನಗಿಲ್ಲ ಆವಾವ ಜನುಮದಲ್ಲಿ
ಅನುದಿನದಲೆನ್ನುದಾಸೀನ ಮಾಡುವುದು
ನಿನಗೆ ಅನುಚಿತೋಚಿತವೆ ಸಜ್ಜನಶಿಖಾಮಣಿಯೆ || ೧ ||

ಕರಣಾಭಿಮಾನಿಗಳು ಕಿಂಕರರು ಮೂರ್ಲೋಕದರಸು
ಹರಿಯು ನಿನ್ನೊಳಗಿಪ್ಪ ಸರ್ವಕಾಲ
ಪರಿಸರನೆ ಈ ಭಾಗ್ಯ ದೊರೆತನಕೆ ಸರಿಯುಂಟೆ
ಗುರುವರ್ಯ ನೀ ದಯಾಕರನೆಂದು ಪ್ರಾರ್ಥಿಸುವೆ || ೨ ||

ಭವರೋಗ ಮೋಚಕನೆ ಪವಮಾನರಾಯ ನಿ
ನ್ನವರವನು ನಾನು ಮಾಧವಪ್ರಿಯನೆ
ಜವನ ಬಾಧೆಯ ಬಿಡಿಸೋ ಅವನಿಯೊಳು ಸುಜನರಿಗೆ
ದಿವಿಜಗಣ ಮಧ್ಯದಲಿ ಪ್ರವರ ನೀನಹುದೊ || ೩ ||

ಜ್ಞಾನವಾಯುರೂಪಕನೆ ನೀನಹುದೊ ವಾಣಿ ಪಂಚಾ
ನನಾದ್ಯಮರರಿಗೆ ಪ್ರಾಣದೇವ
ದೀನವತ್ಸಲನೆಂದು ನಾ ನಿನ್ನ ಮರೆಹೊಕ್ಕೆ
ದಾನವಾರಣ್ಯಕೃಶಾನು ಸರ್ವದಾ ಎನ್ನ || ೪ ||

ಸಾಧನ ಶರೀರವಿದು ನೀ ದಯದಿಕೊಟ್ಟದ್ದು
ಸಾಧಾರಣವಲ್ಲ ಸಾಧುಪ್ರಿಯ
ವೇದವಾದೋದಿತ ಜಗನ್ನಾಥವಿಠಲ
ಪಾದಭಕುತಿಯ ಕೊಟ್ಟು ಮೋದವನು ಕೊಡು ಸತತ || ೫ ||

ಹ್ಯಾಂಗೆ ಬರೆದಿತ್ತೊ ಪ್ರಾಚೀನದಲ್ಲಿ (ಶ್ರೀ ಪುರಂದರದಾಸರು)

ಹ್ಯಾಂಗೆ ಬರೆದಿತ್ತೊ ಪ್ರಾಚೀನದಲ್ಲಿ
ಹಾಂಗೆ ಇರಬೇಕು ಸಂಸಾರದಲ್ಲಿ || ಪ ||

ಪಕ್ಷಿ ಅಂಗಳದಲ್ಲಿ ಬಂದು ಕೂತಂತೆ
ಆ ಕ್ಷಣದಲ್ಲಿ ಅದು ಹಾರಿಹೋದಂತೆ || ೧ ||

ಸಂತೆ ನೆರೆಯಿತು ನಾನಾ ಪರಿ
ತಿರುಗಿ ಹಿಡಿಯಿತು ತಮ್ಮ ತಮ್ಮ ದಾರಿ || ೨ ||

ಆಡುವ ಮಕ್ಕಳು ಮನೆಯ ಕಟ್ಟಿದರು
ಆಟ ಸಾಕೆಂದು ಮುರಿದೋಡಿದರು || ೩ ||

ವಸತಿಕಾರನು ವಸತಿಗೆ ಬಂದಂತೆ
ಹೊತ್ತಾರೆದ್ದು ಹೊರಟು ಹೋದಂತೆ || ೪ ||

ಸಂಸಾರ ಪಾಶವ ನೀನೇ ಬಿಡಿಸಯ್ಯ
ಕಂಸಾರಿ ಪುರಂದರವಿಠ್ಠಲರಾಯ || ೫ ||

ಶ್ರೀ ಮಂಗಲಾಷ್ಟಕಮ್

ಶ್ರೀಮಂಗಲಾಷ್ಟಕಮ್  

ಲಕ್ಷ್ಮೀರ್ಯಸ್ಯ ಪರಿಗ್ರಹಃ ಕಮಲ-ಭೂಃ ಸೂನುರ್ಗರುತ್ಮಾನ್ ರಥಃ
ಪೌತ್ರಶ್ಚಂದ್ರ-ವಿಭೂಷಣಃ ಸುರ-ಗುರು ಶೇಷಶ್ಚ ಶಯ್ಯಾ ಪುನಃ |
ಬ್ರಹ್ಮಾಂಡಂ ವರ-ಮಂದಿರಂ ಸುರ-ಗಣಾಃ ಯಸ್ಯ ಪ್ರಭೋಃ ಸೇವಕಾಃ
ಸ ತ್ರೈಲೋಕ್ಯ-ಕುಟುಂಬ-ಪಾಲನ-ಪರಃ ಕುರ್ಯಾದ್ಧರಿರ್ಮಂಗಲಮ್ || ೧ ||

ಬ್ರಹ್ಮಾ ವಾಯು-ಗಿರೀಶ-ಶೇಷ-ಗರುಡಾ ದೇವೇಂದ್ರ-ಕಾಮೌ ಗುರು-
ಚಂದ್ರಾರ್ಕೌ ವರುಣಾನಲೌ ಮನು-ಯಮೌ ವಿತ್ತೇಶ-ವಿಘ್ನೇಶ್ವರೌ |
ನಾಸತ್ಯೌ ನಿರೃತಿರ್ಮರುದ್-ಗಣ-ಯುತಾಃ ಪರ್ಜನ್ಯ-ಮಿತ್ರಾದಯಃ
ಸಸ್ತ್ರೀಕಾಃ ಸುರ-ಪುಂಗವಾಃ ಪ್ರತಿ-ದಿನಂ ಕುರ್ವಂತು ನೋ ಮಂಗಲಮ್ || ೨ ||

ವಿಶ್ವಾಮಿತ್ರ-ಪರಾಶರೌರ್ವ-ಭೃಗವೋಽಗಸ್ತ್ಯಃ ಪುಲಸ್ತ್ಯಃ ಕ್ರತುಃ
ಶ್ರೀಮಾನತ್ರಿ-ಮರೀಚ್ಯುಚಥ್ಯ-ಪುಲಹಾಃ ಶಕ್ತಿರ್-ವಸಿಷ್ಠೋಽಂಗಿರಾಃ
ಮಾಂಡವ್ಯೋ ಜಮದಗ್ನಿ-ಗೌತಮ-ಭರದ್ವಾಜಾದಯ-ಸ್ತಾಪಸಾಃ
ಶ್ರೀಮದ್-ವಿಷ್ಣು-ಪದಾಂಬುಜೈಕ-ಶರಣಾಃ ಕುರ್ವಂತು ನೋ ಮಂಗಲಮ್ || ೩ ||

ಮಾಂಧಾತಾ ನಹುಷೋಽಂಬರೀಷ-ಸಗರೌ ರಾಜಾ ಪೃಥುರ್ಹೈಹಯಃ
ಶ್ರೀಮಾನ್ ಧರ್ಮ-ಸುತೋ ನಳೋ ದಶರಥೋ ರಾಮೋ ಯಯಾತಿರ್-ಯದುಃ |
ಇಕ್ಷ್ವಾಕುಶ್ಚ ವಿಭೀಷಣಶ್ಚ ಭರತಶ್ಚೋತ್ತಾನಪಾದ-ಧ್ರುವಾ-
ವಿತ್ಯಾದ್ಯಾ ಭುವಿ ಭೂಭುಜಶ್ಚ ಸತತಂ ಕುರ್ವಂತು ನೋ ಮಂಗಲಮ್ || ೪ ||

ಶ್ರೀ-ಮೇರುರ್ಹಿಮವಾಂಶ್ಚ ಮಂದರ-ಗಿರಿಃ ಕೈಲಾಸ-ಶೈಲಸ್ತಥಾ
ಮಾಹೇಂದ್ರೋ ಮಲಯಶ್ಚ ವಿಂಧ್ಯ-ನಿಷಧೌ ಸಿಂಹಸ್ತಥಾ ರೈವತಃ |
ಸಹ್ಯಾದ್ರಿರ್ವರ-ಗಂಧಮಾದನ-ಗಿರಿರ್ಮೈನಾಕ-ಗೋಮಾಂತಕಾ-
ವಿತ್ಯಾದ್ಯಾ ಭುವಿ ಭೂಧರಾಶ್ಚ ಸತತಂ ಕುರ್ವಂತು ನೋ ಮಂಗಲಮ್ || ೫ ||

ಗಂಗಾ-ಸಿಂಧು-ಸರಸ್ವತೀ ಚ ಯಮುನಾ ಗೋದಾವರೀ ನರ್ಮದಾ
ಕೃಷ್ಣಾ ಭೀಮರಥೀ ಚ ಫಲ್ಗು-ಸರಯೂಃ ಶ್ರೀ-ಗಂಡಕೀ ಗೋಮತೀ |
ಕಾವೇರೀ-ಕಪಿಲಾ-ಪ್ರಯಾಗ-ಕಿಟಿಜಾ-ನೇತ್ರಾವತೀತ್ಯಾದಯೋ
ನದ್ಯಃ ಶ್ರೀಹರಿ-ಪಾದ-ಪಂಕಜ-ಭುವಃ ಕುರ್ವಂತು ನೋ ಮಂಗಲಮ್ || ೬ ||

ವೇದಾಶ್ಚೋಪನಿಷದ್-ಗಣಾಶ್ಚ ವಿವಿಧಾಃ ಸಾಂಗಾಃ ಪುರಾಣಾನ್ವಿತಾ
ವೇದಾಂತಾ ಅಪಿ ಮಂತ್ರ-ತಂತ್ರ-ಸಹಿತಾಸ್ತರ್ಕಾಃ ಸ್ಮೃತೀನಾಂ ಗಣಾಃ |
ಕಾವ್ಯಾಲಂಕೃತಿ-ನೀತಿ-ನಾಟಕ-ಯುತಾಃ ಶಬ್ದಾಶ್ಚ ನಾನಾ-ವಿಧಾಃ
ಶ್ರೀವಿಷ್ಣೋರ್ಗುಣ-ನಾಮ-ಕೀರ್ತನ-ಪರಾಃ ಕುರ್ವಂತು ನೋ ಮಂಗಲಮ್ || ೭ ||

ಆದಿತ್ಯಾದಿ-ನವ-ಗ್ರಹಾಃ ಶುಭ-ಕರಾ ಮೇಷಾದಯೋ ರಾಶಯೋ
ನಕ್ಷತ್ರಾಣಿ ಸ-ಯೋಗಕಾಶ್ಚ ತಿಥಯಸ್ತದ್-ದೇವತಾಸ್ತದ್-ಗಣಾಃ |
ಮಾಸಾಬ್ದಾ ಋತವಸ್ತಥೈವ ದಿವಸಾಃ ಸಂಧ್ಯಾಸ್ತಥಾ ರಾತ್ರಯಃ
ಸರ್ವೇ ಸ್ಥಾವರ-ಜಂಗಮಾಃ ಪ್ರತಿ-ದಿನಂ ಕುರ್ವಂತು ನೋ ಮಂಗಲಮ್ || ೮ ||

ಇತ್ಯೇತದ್ ವರ-ಮಂಗಲಾಷ್ಟಕಮಿದಂ ಶ್ರೀರಾಜರಾಜೇಶ್ವರೇ-
ಣಾಽಖ್ಯಾತಂ ಜಗತಾಮಭೀಷ್ಟ-ಫಲ-ದಂ ಸರ್ವಾಶುಭ-ಧ್ವಂಸನಮ್ |
ಮಾಂಗಲ್ಯಾದಿ-ಶುಭ-ಕ್ರಿಯಾಸು ಸತತಂ ಸಂಧ್ಯಾಸು ವಾ ಯಃ ಪಠೇದ್
ಧರ್ಮಾರ್ಥಾದಿ-ಸಮಸ್ತ-ವಾಂಛಿತ-ಫಲಂ ಪ್ರಾಪ್ನೋತ್ಯಸೌ ಮಾನವಃ || ೯ ||

|| ಇತಿ ಶ್ರೀರಾಜರಾಜೇಶ್ವರಯತಿವಿರಚಿತಂ ಮಂಗಲಾಷ್ಟಕಂ ಸಂಪೂರ್ಣಮ್ ||

ಎದುರಾರೋ ಗುರುವೆ ಸಮನಾರೊ (ಶ್ರೀ ವ್ಯಾಸರಾಯರು)

ರಾಗ: ಆನಂದಭೈರವಿ             ಆದಿತಾಳ

ಎದುರಾರೊ ಗುರುವೆ ಸಮನಾರೊ || ಪ ||
ಮದನಗೋಪಾಲನ ಪ್ರಿಯ ಜಯರಾಯ || ಅ.ಪ ||

ಕಡುಗರ್ಜಿಸುವ ಕೇಸರಿಯಂತೆ ನಿಮ್ಮ ವಾದ-
ಗಡಣೆಯ ಕೇಳುತ ನುಡಿ ಮುಂದೋಡದೆ
ಗಡಗಡ ನಡುಗುತ ಮಾಯ್ಗೋಮಾಯ್ಗಳು
ಅಡವಿಯೋಳಡಗೋರು ನಿಮ್ಮ ಭೀತಿಯಲಿ || ೧ ||

ಕುಟಿಲಮತಗಳೆಂಬೊ ಚಟುಲಂಧಕಾರಕ್ಕೆ
ಪಟುತರ ತತ್ತ್ವಪ್ರಕಾಶಿಕೆಂತೆಂಬ
ಚಟುಲಾತಪದಿಂದ ಖಂಡಿಸಿ ತೇಜೋ-
ತ್ಕಟದಿ ಮೆರೆದೆ ಬುಧಕಟಕಾಬ್ಜಮಿತ್ರ  || ೨ ||

ಅಮಿತದ್ವಿಜಾವಳಿಕುಮುದಗಳರಸಿ
ವಿಮತರ ಮುಖಕಮಲಂಗಳ ಬಾಡಿಸಿ
ಸ್ವಮತರ ಹೃತ್ಸಂತಾಪಗಳೋಡಿಸಿ
ವಿಮಲಸುಕೀರ್ತಿಯ ಪಡೆದೆಯೊ ಚಂದ್ರ || ೩ ||

ವೇದಶಾಸ್ತ್ರಗಳೆಂಬೊ ಶೃಂಗಗಳಿಂದ ಸು-
ಧಾದಿಗ್ರಂಥಗಳೆಂಬೊ ಸ್ತನದಿಂದೊಪ್ಪುತ ತತ್ತ್ವ-
ಬೋಧೆಯೆಂಬ ದುಗ್ಧ ಶಿಷ್ಯವತ್ಸಂಗಳಿಗೆ
ಆದರದಲಿ ಕೊಟ್ಟ ಯತಿಸುರಧೇನು || ೪ ||

ವ್ಯಾಸಸೂತ್ರಗಳೆಂಬ ಮಂದರವನು ವೇದ
ರಾಶಿಯೆಂಬ ವಾರಾಶಿಯೊಳಗಿಟ್ಟು |
ಶ್ರೀಸರ್ವಜ್ಞರ ವಾಕ್ಯಪಾಶದಿ ಸುತ್ತಿ
ಭಾಸುರನ್ಯಾಯಸುಧಾ ಪಡೆದ ಯತೀಂದ್ರ || ೫ ||

ವನಜನಾಭನ ಗುಣಮಣಿಗಳು  ಸರ್ವಜ್ಞ-
ಮುನಿಕೃತಗ್ರಂಥಗಳವನಿಯೊಳಡಗಿರೆ ಸ-
ಜ್ಜನರಿಗೆ ಟೀಕಾಂಜನದಿಂದ ತೋರಿಸಿ
ಘನಸುಖಸಾಧನ ಮಾಡಿದ್ಯೊ ಧೀರ || ೬ ||

ಅರ್ಥಿಮಂದಾರ ವೇದಾರ್ಥವಿಚಾರ ಸ-
ಮರ್ಥ ಶ್ರೀಕೃಷ್ಣ ಪಾದಾಂಬುಜಲೋಲ ಪ್ರ-
ತ್ಯರ್ಥಿಮತ್ತೇಭಕಂಠೀರವಾಕ್ಷೋಭ್ಯ-
ತೀರ್ಥಕರಜ ಜಯತೀರ್ಥಯತೀಂದ್ರ || ೭ ||